April 18, 2025

ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ,ದಾಸರಹಳ್ಳಿ: ವಿಷ್ಣು ಮತ್ತು ವಾಲ್ಮೀಕಿ ಕ್ರಿಕೆಟರ್ಸ್ ವತಿಯಿಂದ ರಮೇಶ್ ಹಾಗೂ ಸಂಗಡಿಗರ ನೇತೃತ್ವದಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡ್ ನ ಡಾಕ್ಟರ್ ವಾಟರ್ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ 4ನೇ ವರ್ಷದ ಅದ್ದೂರಿ ಗಣೇಶ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ರಾಜಗೋಪಾಲನಗರ ವಾರ್ಡ್ ನ ಕಾಂಗ್ರೆಸ್ ಮುಖಂಡರಾದ ರುದ್ರೇಗೌಡರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ರಾಜಗೋಪಾಲನಗರ ವಾರ್ಡ್ ಕಾಂಗ್ರೆಸ್ ಮುಖಂಡರಾದ ರುದ್ರೇಗೌಡ್ರು, ‘ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜನರನ್ನು ಒಗ್ಗೂಡಿಸಲು ಆರಂಭವಾದ ಗಣೇಶೋತ್ಸವ ಕಾರ್ಯಕ್ರಮಗಳ ಸಂಸ್ಕೃತಿಯು ಈಗಲೂ ಕೂಡ ಮುಂದುವರಿದು ಜನರೆಲ್ಲರೂ ಒಂದುಗೂಡಿ ಹಬ್ಬಗಳನ್ನು ಆಚರಿಸುವ ಮೂಲಕ ಪರಸ್ಪರ ಒಡನಾಟದಿಂದ ಬಾಳಲು ಸಹಕಾರಿಯಾಗುತ್ತಿದೆ’, ಎಂದು ಹೇಳಿದರು.

ಪೀಣ್ಯ ಕೈಗಾರಿಕಾ ಪ್ರದೇಶ ಹಾಗೂ ರಾಜಗೋಪಾಲನಗರ ವಾರ್ಡ್ ನ ಮುಖ್ಯ ರಸ್ತೆಗಳ ಮೂಲಕ ಡಿ.ಜೆ ಸೌಂಡಿಗೆ ಹೆಜ್ಜೆ ಹಾಕುತ್ತಾ ಪಟಾಕಿ ಸಿಡಿಮದ್ದುಗಳೊಂದಿಗೆ ಹೆಗ್ಗನಹಳ್ಳಿ ಮುಖ್ಯರಸ್ತೆ ಮುಖಾಂತರ ಸುಂಕದಕಟ್ಟೆವರೆಗೂ ಮೆರವಣಿಗೆಯಲ್ಲಿ ಸಾಗಿ ನಂತರ ಅದ್ದೂರಿಯಾಗಿ ವಿಸರ್ಜನೆ ಮಾಡಲಾಯಿತು. ಕಾರ್ಯಕ್ರಮದ ಪ್ರಯುಕ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡ್ ಹಾಗೂ ರಾಜಗೋಪಾಲನಗರ ವಾರ್ಡ್ ನ ಹಲವಾರು ಮುಖಂಡರು, ಗಣ್ಯರು, ವಿಷ್ಣು ಮತ್ತು ವಾಲ್ಮೀಕಿ ಕ್ರಿಕೆಟರ್ಸ್ ನ ಪದಾಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!