April 18, 2025

ಪಬ್ಲಿಕ್ ರೈಡ್ ಧಾರವಾಡ

ಜನಾದೇಶದ ಮೇಲೆ ಆಡಳಿತ ಮಾಡುತ್ತಿರುವ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಜೆಡಿಎಸ್ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿ, ಧಾರವಾಡದಲ್ಲಿ ಕಾಂಗ್ರೆಸ್ ನಾಯಕರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಎರಡು ಪಕ್ಷದ ವಿರುದ್ಧ ತಮ್ಮ‌ ಆಕ್ರೋಶ ಹೊರಹಾಕಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು, ಬಿಜೆಪಿ ಜೆಡಿಎಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‌ಜನಾದೇಶದ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ಮಾಡುತ್ತಿದೆ. ಜನಪರ ಗ್ಯಾರಂಟಿ ಯೋಜನೆಗಳನ್ನು ಸಹಿಸಿಕೊಳ್ಳದ ವಿಪಕ್ಷಗಳು ಸರ್ಕಾರದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ.

ಸಿಎಂ ಅವರ ತಪ್ಪೆ ಇಲ್ಲದ ಮುಡಾದಲ್ಲಿ ಉದೇಶಪೂರ್ವಕವಾಗಿ ಸೊಲುಕಿಸುವ ಪ್ರಯತ್ನವನ್ನು ರಾಜ್ಯಪಾಲರ ಮೂಲಕ ಬಿಜೆಪಿ ಜೆಡಿಎಸ್ ಮಾಡುತ್ತಿದೆ. ರಾಜ್ಯದ ಜನ ಬಿಜೆಪಿ ಜೆಡಿಎಸ್ ಕುತಂತ್ರವನ್ನು ನೋಡುತ್ತಿದ್ದಾರೆ. ಈ ಕೂಡಲೇ ಬಿಜೆಪಿ ಜೆಡಿಎಸ್ ಕುತಂತ್ರ ರಾಜಕಾರಣ ಹಾಗೂ ಸೇಡಿನ ರಾಜಕಾರಣದಿಂದ ಹಿಂದೆ ಸರಿಯಬೇಕು, ಇಲ್ಲವಾದಲ್ಲಿ ರಾಜ್ಯವ್ಯಾಪಿ ಇವರ ಸೇಡಿನ‌ ರಾಜಕಾರಣವನ್ನು ಜನರಿಗೆ ತಿಳಿಸುವ ಹೆಜ್ಜೆ ನಾವು ಇಡುತ್ತೇವೆ ಎನ್ನುವ ಮೂಲಕ ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

error: Content is protected !!