April 18, 2025

ಪಬ್ಲಿಕ್ ರೈಡ್ ಧಾರವಾಡ: ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತಿದ್ದ, ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮೊಹರಂ ಕುಳಗಳಿಗೆ ಬಿಸಿ ಮುಟ್ಟಿಸಿದ್ದಾರೆ.‌

ಸಲಕಿನಕೊಪ್ಪದ ಸಣ್ಣ ಸೋಮಾಪುರಕ್ಕೆ ಭೂ ವಿಜ್ಞಾನಿ ಮಹೇಶ ಗೌಡನಾಯ್ಕರ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ದಾಳಿ ಮಾಡಲಾಗಿದ್ದು, ಎರಡು ಟಿಪ್ಪರ ಸೇರಿ ಮೂರು ಟ್ಯಾಕ್ಟರ್ ಜಪ್ತ ಮಾಡಲಾಗಿದೆ.‌

ಇನ್ನೂ ದಾಳಿಯ ವೇಳೆ ನಾಗೇಶ ಅಣ್ಣಿಗೇರಿ ಹಾಗೂ ಪವನಗೌಡ ಹೊಸೂರ ಎಂಬುವರು ಇಲಾಖೆಯ ಅನುಮತಿ ಇಲ್ಲದೆ ಮೊರಂ ಅಗೆದು ಸಾಗಾಟ ಮಾಡಿರುವುದು ತಿಳಿದು ಬಂದಿದೆ. ಮೊರಂ ಸಾಗಿಸಲು ಬಳಸುತ್ತಿದ್ದ 2 ಟಿಪ್ಪರ್ ಹಾಗೂ 3 ಟ್ರ್ಯಾಕ್ಟರ್‍ಗಳನ್ನು ಜಪ್ತಿ ಮಾಡಿ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಮತ್ತು ಈ ಕುರಿತು ಭೂಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!