
ಧಾರವಾಡ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ದಾಖಲಾಗಿದ್ದ ಪೋಕ್ಸ ಪ್ರಕರಣದಲ್ಲಿ ಧಾರವಾಡ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.