April 28, 2025

ಧಾರವಾಡ

ಬೈಕ್‌ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿರುವ ಧಾರವಾಡ ಉಪನಗರ ಠಾಣೆ ಪೊಲೀಸರು ಬಂಧಿತರಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಒಟ್ಟು 5 ಬೈಕ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಧಾರವಾಡದಲ್ಲಿ ಬೈಕ್ ಕಳ್ಳತನ ಜೋರಾಗಿಯೇ ನಡೆದಿತ್ತು. ಈ ಕಳ್ಳರ ಮೇಲೆ ನಿಗಾವಹಿಸಿದ್ದ ಪೊಲೀಸರು ಕಳ್ಳರ ಪತ್ತೆಗಾಗಿ ತೆರೆಮರೆಯಲ್ಲಿಯೇ ಕಸರತ್ತು ನಡೆಸಿದ್ದರು.

ಎಸಿಪಿ ಪ್ರಶಾಂತ ಸಿದ್ದನಗೌಡರ ಮಾರ್ಗದರ್ಶನದಲ್ಲಿ ಸಿಪಿಐ ದಯಾನಂದ ಶೇಗುಣಸಿ, ಪಿಎಸ್‌ಐ ರುದ್ರಪ್ಪ ಗುಡದರಿ, ವಿ.ಐ.ಬಳ್ಳಾರಿ, ಸಿಬ್ಬಂದಿ ದಯಾನಂದ, ಮುಸ್ತಫಾ ಬೀಳಗಿ, ನಾಗರಾಜ ವಡ್ಡಪ್ಪಗೋಳ, ಪ್ರದೀಪ ಕುಂದಗೋಳ, ಹನುಮಂತ ಜಟ್ಟಣ್ಣವರ ಸೇರಿದಂತೆ ಇತರರು ಕಾರ್ಯಾಚರಣೆ ನಡೆಸಿ, ಇಬ್ಬರು ಬೈಕ್ ಕಳ್ಳರನ್ನು ಹೆಡೆಮುರಿ ಕಟ್ಟಿದ್ದಾರೆ. ಈ ಕುರಿತು ಉಪನಗರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!