April 19, 2025

ಪಬ್ಲಿಕ್ ರೈಡ್ ನ್ಯೂಸ್ Breaking

ಹುಬ್ಬಳ್ಳಿ- ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಆರಂಭವಾದ ಜಗಳ ಓರ್ವನ್ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಬ್ಬಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಗದೀಶ ದಾಬಾ ಬಳಿ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ವರೂರಿನ ಜಗದೀಶ ದಾಬಾ ಬಳಿ ಘಟನೆ ನಡೆದಿದ್ದು, ಮೂವತೈದು ವರ್ಷದ ಸುಧೀರ ಹುಲಗುರ ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ‌ಇನ್ನೂ ಕೊಲೆ ಮಾಡಿದ ವ್ಯಕ್ತಿ ಸಾಗರ ಹತ್ಯೆಯ ನಂತರ ಪರಾರಿಯಾಗಲು ಯತ್ನಿಸುತ್ತಿದನ್ನು ಗಮನಿಸಿದ ಸಾರ್ವಜನಿಕರು, ಕೊಲೆ ಆರೋಪಿಗೆ ಹಿಗ್ಗಮುಗ್ಗಾ ಥಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅರೋಪಿ ಸಾಗರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳ ವರೂರು ಗ್ರಾಮದವರೆಂದು ಹೇಳಲಾಗುತ್ತಿದೆ. ಸ್ಥಳೀಯರಿಂದ ಘಟನೆಯ ಮಾಹಿತಿ ಮಾಹಿತಿ ಪಡೆದುಕೊಂಡ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.

ಜೊತೆಗೆ ಘಟನಾ ಸ್ಥಳಕ್ಕೆ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಸ್ಥಳಕ್ಕೆ ಭೇಟಿ ನೀಡಿ, ಠಾಣಾ ಅಧಿಕಾರಿಗಳಿಂದ ತನಿಖೆಯ ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!