
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ: ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯ ಅಕಾಡೆಮಿ ಹಾಗೂ ಇಚ್ಚಾ ಫೌಂಡೇಶನ್ ಸಹಯೋಗದೊಂದಿಗೆ ತಮಿಳುನಾಡಿನ ಹೊಸೂರಿನಲ್ಲಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಸಮಾರಂಭ ಜರುಗಿತು. ವಿಜಯಪುರ ಜಿಲ್ಲೆ ಕೋಳೂರು ತಾಲೂಕು ಮುದ್ದೇಬಿಹಾಳು ಚಿನಕುರಳಿ ಗ್ರಾಮ ಯವರಾದ ಸುರೇಶ್ ಕೊಟ್ರಪ್ಪ ಹರನಾಳ ಸುರೇಶ್ ಅವರ ಸಂಘಟನಾ ಕೌಶಲ್ಯ ಹಾಗೂ ಸಮಾಜ ಪದವಿ ಪೂರ್ವ ಪದವಿ ಎಂಜಿ ಮಹಾವಿದ್ಯಾಲಯ ಮುದ್ದೇಬಿಹಾಳ ನಲ್ಲಿ ಕರ್ನಾಟಕ ಯುನಿವರ್ಸಿಟಿಯ ಧಾರವಾಡದಲ್ಲಿ ಎಂಎ ಮತ್ತು ಮಹಾವಿದ್ಯಾಲಯದಲ್ಲಿ ಬಿಇಡಿ ಇರುತ್ತದೆ ಜಯಂತಿ ವಿ ಸಿ ಸೇವೆ ಮತ್ತು ವೃತ್ತಿ ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.
ಈ ವೇಳೆ ಮಾತನಾಡಿದ ಅವರು ‘ನನ್ನ ಸ್ನೇಹಿತರ ಹಾಗೂ ಹಿತೈಷಿಗಳ ಸಹಕಾರದಿಂದ ನಾನು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದು, ಈ ನನ್ನ ಸೇವೆ ಮುತ್ತು ವಿವಿಧ ಆಯಾಮಗಳನ್ನ ಮಾಡಿ ಸಮಾಜದಲ್ಲಿನ ಹೋರೆ ಕೋರೆಗಳನ್ನು ತಿದ್ದುವ ಕಾರ್ಯವನ್ನು ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿಯವರು ನನಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದು ತುಂಬಾ ಖುಷಿಯಾಗಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಬಡವರಿಗೆ ಹಾಗೂ ಕಾರ್ಮಿಕರಿಗೆ ಸಹಾಯ ಮಾಡಿ ಅವರ ಉನ್ನತಿಗೆ ದುಡಿಯುತ್ತೇನೆ’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಏಷ್ಯಾ ಇಂಟರ್ನಾಷನಲ್ ಕಲ್ಚರಲ್ ಅಕಾಡೆಮಿಯ ಸಂಸ್ಥಾಪಕ ರಾದ ಬಾಬು ವಿಜಯನ್, ಆಂಧ್ರಪ್ರದೇಶದ ನಿವೃತ್ತ ನ್ಯಾಯಮೂರ್ತಿಗಳಾದ ಹರಿದಾಸ್, ತಮಿಳುನಾಡಿನ ಮಾಜಿ ಶಾಸಕ ಮನೋಕರನ್, ಕನ್ನಡ ಚಿತ್ರನಟಿ ಸುಮತಿ ಶ್ರೀ, ಏಕತಾ ಫೌಂಡೇಶನ್ ಬಸವಯೋಗಿ ಗುರೂಜಿ, ಮುಂತಾದವರು ಉಪಸ್ಥಿತರಿದ್ದರು.